Advertisement

ಮೂಲ ಸೌಕರ್ಯಗಳ ಕೊರತೆ, ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ಪ್ರತಿಭಟನೆ

[ad_1]

ABVP Protest

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ (Maharani Cluster University) ಮೂಲ ಸೌಕರ್ಯಗಳ ಕೊರತೆ, ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ಎಬಿವಿಪಿ (ABVP) ಸಂಘಟನೆ ಜೊತೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

ಉಪ ಕುಲಪತಿಗಳ ಕಚೇರಿ ಮುಂದೆ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ (Department of Computer Science) ಇನ್ವೈಟಿ ಟ್ಯಾಕ್ಸ್ ಕಾರ್ಯಕ್ರಮದ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಸುಮಾರು 1 ಕೋಟಿ ರೂಪಾಯಿ ಹಗರಣ ನಡೆದಿದೆ ಅಂತ ವಿದ್ಯಾರ್ಥಿಗಳು ಆರೋಪಿಸಿದರು.

ABVP Protest 23

ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಬೇಕು ಅಂತ ಒತ್ತಾಯ ಮಾಡಿದ್ರು. ಕ್ಯಾಂಪಸ್‌ನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕುಡಿಯುವ ನೀರು, ಶೌಚಾಲಯ, ಫ್ಯಾನ್, ಸಿಸಿ ಟಿವಿ ವ್ಯವಸ್ಥೆ ಇಲ್ಲ. ಉಪನ್ಯಾಸಕರು ಇಲ್ಲ. ಇದರಿಂದ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗ್ತಿದೆ ಅಂತ ತಿಳಿಸಿದರು. ಇದನ್ನೂ ಓದಿ: ನಾಳೆಯಿಂದ ಘನತ್ಯಾಜ್ಯ ನಿರ್ವಹಣೆಗೆ ಹೊಸ ನಿಯಮ ಜಾರಿ – ಉಲ್ಲಂಘಿಸಿದ್ರೆ GBAಯಿಂದ ದಂಡಾಸ್ತ್ರ

ABVP Protest 2

ಉಪ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ಕುಲಪತಿಗಳು ಒಂದು ವಾರದೊಳಗೆ ಮೂಲಭೂತ ಸೌಕರ್ಯಗಳನ್ನ ಒದಗಿಸೋ ಭರವಸೆ ಕೊಟ್ಟರು. ಒಂದು ವಾರದಲ್ಲಿ ಸಮಸ್ಯೆ ಬಗೆಹರಿಯದೇ ಹೋದ್ರೆ ಮತ್ತೆ ಪ್ರತಿಭಟನೆ ಮಾಡೋ ಎಚ್ಚರಿಕೆ ಎಬಿವಿಪಿ ಕೊಟ್ಟಿದೆ. ಇದನ್ನೂ ಓದಿ:  ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದ ʻಗ್ಯಾಸ್‌ ಟ್ರಬಲ್‌ʼ – ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ ಹಾಹಾಕಾರಕ್ಕೆ ತತ್ತರಿಸಿದ ಜನ

[ad_2]

Source link publictv.in

Leave a Reply

Your email address will not be published. Required fields are marked *