[ad_1]
ದಾವಣಗೆರೆ: ದಾವಣಗೆರೆಯಲ್ಲಿ ಖಾಸಗಿ ಒಡೆತನದ 2 ಮೆಡಿಕಲ್, 2 ಡೆಂಟಲ್ ಕಾಲೇಜುಗಳಿವೆ. ಆದರೆ, ಸರ್ಕಾರಿ ಮೆಡಿಕಲ್ ಕಾಲೇಜು ಯಾಕಿಲ್ಲ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಕಿಡಿಕಾರಿದರು.
ವಾಣಿಜ್ಯ ಸಿಲಿಂಡರ್ ಬೆಲೆ 195.50 ರೂ. ಹೆಚ್ಚಳ; ಗೃಹ ಬಳಕೆ ಸಿಲಿಂಡರ್ ನಲ್ಲಿ ಯಾವುದೇ ಏರಿಕೆ ಇಲ್ಲ...!
ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಶ್ರೀಮಂತ ಕುಟುಂಬ ಒಡೆತನದ ಮೆಡಿಕಲ್ ಕಾಲೇಜುಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳಿ ಸರ್ಕಾರಿ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಸ್ಥಿತಿ ಇದೆ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ಎರಡ್ಮೂರು ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ದಾವಣಗೆರೆ ಮೆಡಿಕಲ್ ಹಬ್ ಎನ್ನಲಾಗುತ್ತಿದೆ. ಸುತ್ತಮುತ್ತಲಿನ ಜಿಲ್ಲೆಗಳ ಸಾವಿರಾರು ಸಂಖ್ಯೆಯ ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅಧಿಕಾರದಲ್ಲಿರುವವರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಸಕ್ತಿ ತೋರುತ್ತಿಲ್ಲ ಎಂದರು.
ಮೆಡಿಕಲ್ ಕಾಲೇಜು ಸ್ಥಾಪನೆಗೆ ಹೋರಾಟ
ಚಿತ್ರದುರ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಿವೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದರು.
ಈ ಉಪಚುನಾವಣೆ ಶ್ರೀಮಂತ-ಜನಸಾಮಾನ್ಯ ನಡುವಿನ ಚುನಾವಣೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರನ್ನು ಮತದಾರರು ಬೆಂಬಲಿಸಿ. ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ರೆ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ಮತ್ತಷ್ಟು ಶಕ್ತಿ ಬರಲಿದೆ.
[ad_2]
Source link

















Leave a Reply