Advertisement

Udupi :ಉದ್ಯಮಿ ಸಂದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ

[ad_1]

Udupi : ಪ್ರೀತಿಸಿ ಹೊಸದಾಗಿ ವಿವಾಹವಾಗಿದ್ದ ಉದ್ಯಮಿ ಸಂದೀಪ್ ಶೆಟ್ಟಿ ಕೇವಲ ಒಂದು ತಿಂಗಳ ಅಂತರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉಡುಪಿಯಲ್ಲಿ ನಡೆದಿತ್ತು. ಪತ್ನಿ ಸೌಮ್ಯ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಇದೀಗ ಈ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು ಸೌಮ್ಯ ತನ್ನ ಗಂಡನ ಸಾವಿಗೆ ಕಾರಣವೇನೆಂಬುವ ವಿಚಾರವನ್ನು ಬಯಲು ಮಾಡಿದ್ದಾರೆ.

ಕಾರ್ಕಳ ತಾಲೂಕಿನ ಬಂಗ್ಲಗುಡ್ಡೆ ನಿವಾಸಿ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸಂದೀಪ್ ಶೆಟ್ಟಿ, ಮೇಕಪ್ ಆರ್ಟಿಸ್ಟ್ ಹಾಗೂ ನಾತಕ ತಂಡಗಳಲ್ಲಿ ಕಲಾವಿದೆಯಾಗಿದ್ದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾದ ಕೇವಲ ಒಂದು ತಿಂಗಳಲ್ಲಿ ದಂಪತಿಗಳ ನಡುವೆ ಉಂಟಾದ ವಿರಸವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಅಲ್ಲದೆ ಪತ್ನಿ ಸೌಮ್ಯಾಳ ಸರಣಿ ವಿವಾಹ ಹಾಗೂ ಆಕೆ ನೀಡುತ್ತಿದ್ದ ಎನ್ನಲಾದ ಮಾನಸಿಕ ಕಿರುಕುಳವೇ ಸುದೀಪ್ ಸಾವಿಗೆ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದಾದ ಬಳಿಕ ಸೌಮ್ಯಳ ಹಳೆ ಪ್ರೇಮಿ ಎಂದು ಹೇಳಿಕೊಂಡು ವೇಣು ಶೆಟ್ಟಿ (Venu Shetty) ಎಂಬಾತ ಸೌಮ್ಯ ವಿರುದ್ಧ ಗಂಭೀರವಾಗಿ ಆರೋಪ ಮಾಡಿದ್ದರು. ಇದೀಗ ಪ್ರತಿಯೊಂದು ಆರೋಪಕ್ಕೂ ಸೌಮ್ಯ ಉತ್ತರ ಕೊಟ್ಟಿದ್ದಾರೆ. ಸುದೀಪ್ ಸಾವಿಗೆ ನಾನು ಕಾರಣ ಅಲ್ಲ ಎಂದು ಪುನರುಚ್ಚರಿಸಿರುವ ಸೌಮ್ಯ, ವೇಣು ಶೆಟ್ಟಿಯ ಜಾತಕ ಬಿಚ್ಚಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸುದೀಪ್ ಸಾವಿಗೂ ಮುನ್ನ ಸೌಮ್ಯ ಶೆಟ್ಟಿ ನೆಲ್ಯಾಡಿಗೆ ಬಂದು ರಂಪಾಟ ಮಾಡಿದ್ದರು ಎಂಬ ಅತ್ತೆ ಪುಷ್ಪಲತಾ ಶೆಟ್ಟಿ ಅವರ ಆರೋಪಕ್ಕೆ ಸೌಮ್ಯ ಉತ್ತರಿಸಿದ್ದು, ‘ಸುದೀಪ್ ಅವರ ಮೊಬೈಲ್ ಸ್ವಿಚ್ ಆಫ್ ಇದ್ದ ಕಾರಣ ನಾನು ಆತಂಕಗೊಂಡು ನೆಲ್ಯಾಡಿಗೆ ಹೋಗಿದ್ದೆ. ಅಲ್ಲಿ ಅವರ ಮನೆಯವರು ನನಗೆ ಅಸಭ್ಯ ಭಾಷೆಯಲ್ಲಿ ಬೈದರು. ಹೆಂಡತಿಯಾಗಿ ನಾನು ಅಲ್ಲಿ ಧ್ವನಿ ಎತ್ತಿದ್ದು ನಿಜ, ಆದರೆ ಅದು ರಂಪಾಟವಲ್ಲ. ನಾನು ವಿಷ ಹಾಕಿದ್ದೇನೆ ಎಂಬ ಆರೋಪ ಸಂಪೂರ್ಣ ಸುಳ್ಳು, ಬೇಕಿದ್ದರೆ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಿ’ ಎಂದು ಸವಾಲು ಹಾಕಿದ್ದಾರೆ.

ಅಲ್ಲದೆ ನಾನು ಸುದೀಪ್ ಮೊಬೈಲ್ ಸ್ವಿಚ್ ಆಫ್ ಇದ್ದ ಕಾರಣಕ್ಕೆ ನೆಲ್ಯಾಡಿಗೆ ಹೋಗಿದ್ದೆ. ಅವರ ಸಂಪರ್ಕ ಸಿಗದೆ ನಾನು ಆತಂಕಗೊಂಡಿದ್ದೆ. ನಾನು ಯಾವುದೇ ರಂಪಾಟ ಮಾಡಿಲ್ಲ. ಬೇಕಿದ್ದರೆ ಸಿಸಿ ಕ್ಯಾಮೆರಾ ಚೆಕ್ ಮಾಡಲು ನಾನು ಕೂಡ ಆಗ್ರಹಿಸುತ್ತೇನೆ. ನಾನು ಕೂಗಿದ್ದು ನಿಜ. ಸುದೀಪ್ ತಾಯಿ ನನಗೆ ಬೇಡದ ಭಾಷೆಯಲ್ಲಿ ಬೈದಿದ್ದಾರೆ. ಸುದೀಪ್‌ನನ್ನು ಬಿಟ್ಟು ಬಿಡುವಂತೆ ಬೈದಿದ್ದರು. ಹೆಂಡತಿಯಾಗಿ ಬೇಸರಗೊಂಡು ನಾನು ಕೂಗಿದ್ದು ನಿಜ. ನನ್ನ ಮನೆಗೆ ಬಂದು ಮದುವೆಗೆ ಮಾತುಕತೆ ಮಾಡಿದ್ದರು. ನಂತರ ಬೀದಿಯಲ್ಲಿ ನನಗೆ ಬೈದಿದ್ದಾರೆ. ನಾನು ರಂಪಾಟ, ಕಿರುಚಾಟ ಮಾಡಿಲ್ಲ. ಸುದೀಪ್ ನಮ್ಮ ಮನೆಯಲ್ಲಿ ಇದ್ದರು. ಮಾರ್ಚ್ ಹದಿನಾರಕ್ಕೆ ನೆಲ್ಯಾಡಿಗೆ ಹೋಗಿದ್ದರು. ಮನೆಗೆ ತಂದೆ ಸಾಲಗಾರರನ್ನು ಕರೆಸಿದ್ದರು. ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ನಾನು ನೆಲ್ಯಾಡಿಗೆ ಹೋಗಿದ್ದೆ. ಅವರಿಗೆ 8-9 ವರ್ಷಗಳಿಂದ ಸಾಲ ಇತ್ತು. ಅವರ ಸಾವಿಗೆ ಸಾಲಗಾರರೇ ಕಾರಣ ಎಂದು ಹೇಳಲು ಆಗಲ್ಲ. ತಂದೆಯ ಮನೆಗೆ ಹೋಗಿ ಬಂದ ನಂತರ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ ಎಂದು ಸೌಮ್ಯ ತಮ್ಮ ವಿರುದ್ಧದ ಆರೋಪವನ್ನು ತಳ್ಳಿಹಾಕಿದ್ದಾರೆ. 

banner

ಬಳಿಕ ಸಂದೀಪ್ ಕಾರ್ಕಳದಲ್ಲಿರುವ ಪತ್ನಿ ಮನೆಗೆ ಬಂದಿದ್ದರು. ಮರುದಿನ ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಸೌಮ್ಯ ಪತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗಲೇ ಗೊತ್ತಾಗಿದ್ದು, ಆತ ಅದಾಗಲೇ ವಿಷ ಸೇವಿಸಿದ್ದಾರೆ ಎಂಬುದು. ಬಳಿಕ ಸುದೀಪ್ ತಂದೆ ಮಗನನ್ನು ಮಂಗಳೂರಿನ ಯೇನಪೋಯ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಆಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಉದ್ಯಮಿಯ ಸಾವಿನ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಪತ್ನಿಯ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿಯ ಕಿರುಕುಳ ಅಥವಾ ಅವರ ನಡುವಿನ ಸಂಘರ್ಷವೇ ಈ ಆತ್ಮಹತ್ಯೆಗೆ ಪ್ರೇರಣೆಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಉದ್ಯಮಿಯ ಸಾವಿಗೆ ನಿಖರ ಕಾರಣವೇನು? ದಂಪತಿಗಳ ನಡುವೆ ಅಂತಹದ್ದೇನು ಘರ್ಷಣೆ ನಡೆದಿತ್ತು? ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಇನ್ನೂ ವೇಣು ಶೆಟ್ಟಿ ವಿರುದ್ಧವೂ ಸೌಮ್ಯ ಶೆಟ್ಟಿ ಕಿಡಿಕಾರಿದ್ದಾರೆ. ‘ವೇಣು ಶೆಟ್ಟಿ ಒಬ್ಬ ನಾಟಕ ಕಲಾವಿದ, ಆತನ ಕ್ಯಾರೆಕ್ಟರ್ ಸರಿ ಇಲ್ಲ. ಹಲವು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದ ಆತನ ಬಗ್ಗೆ ತಿಳಿಯುತ್ತಿದ್ದಂತೆಯೇ ನಾನು ದೂರವಾಗಿದ್ದೆ. ಆದರೆ ಆತ ಸುದೀಪ್ ಅವರ ತಂದೆಯ ತಲೆ ಕೆಡಿಸಿ ಈ ಆತ್ಮ*ಹತ್ಯೆಗೆ ಪ್ರಚೋದನೆ ನೀಡಿದ್ದಾನೆ. ಆತನ ಬಗ್ಗೆ ಇರುವ ಎಲ್ಲಾ ದಾಖಲೆಗಳನ್ನು ನಾನು ಪೊಲೀಸರಿಗೆ ನೀಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.



[ad_2]

Source link

Leave a Reply

Your email address will not be published. Required fields are marked *