[ad_1]
ಬೆಂಗಳೂರು: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ. ಯಾರು ವದಂತಿಗಳಿಗೆ ಕಿವಿಗೊಡಬಾರದು ಎಂದು ಆಹಾರ ಇಲಾಖೆ (Department of Food) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿ ಹರಡುತ್ತಿದೆ. ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್ಸೈಟ್ನಲ್ಲಿ ರಿಸಲ್ಟ್ ಲಭ್ಯ
ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ IOC (ಇಂಡಿಯನ್ ಆಯಿಲ್), BPC (ಭಾರತ್ ಪೆಟ್ರೋಲಿಯಂ) ಮತ್ತು HPC (ಹಿಂದೂಸ್ತಾನ್ ಪೆಟ್ರೋಲಿಯಂ) ಮೂಲಕ ಹೆಚ್ಚಿನ ಪ್ರಮಾಣದ ಅನಿಲವನ್ನು ಪೂರೈಕೆ ಮಾಡಲಾಗುತ್ತಿದೆ. ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಅನ್ನು ಸರಬರಾಜು ಮಾಡುತ್ತಿದ್ದವು. ಆದರೆ ಪ್ರಸ್ತುತ ಬೇಡಿಕೆಯನ್ನು ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಅನ್ನು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ ಅಂತ ಮಾಹಿತಿ ನೀಡಿದೆ.
ಕಳೆದ ಏಪ್ರಿಲ್ 2ರಿಂದ ಏಪ್ರಿಲ್ 6ರವರೆಗಿನ ಅಂಕಿಅಂಶಗಳನ್ನು ಗಮನಿಸಿದರೆ, ಪೂರೈಕೆಯಲ್ಲಿ ಸ್ಥಿರತೆ ಇರುವುದು ಕಂಡುಬರುತ್ತಿದೆ.
ಏಪ್ರಿಲ್ 2: 87.78 ಮೆಟ್ರಿಕ್ ಟನ್
ಏಪ್ರಿಲ್ 3: 86.05 ಮೆಟ್ರಿಕ್ ಟನ್
ಏಪ್ರಿಲ್ 4: 84.80 ಮೆಟ್ರಿಕ್ ಟನ್
ಏಪ್ರಿಲ್ 5: 94.11 ಮೆಟ್ರಿಕ್ ಟನ್ (ಗರಿಷ್ಠ)
ಏಪ್ರಿಲ್ 6: 83.58 ಮೆಟ್ರಿಕ್ ಟನ್
ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ. ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಇಂತಹ ಯಾವುದೇ ಸುಳ್ಳು ವದಂತಿಗಳನ್ನು ನಂಬಬಾರದು ಮತ್ತು ಆತಂಕಕ್ಕೊಳಗಾಗಿ ಬಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು ಎಂದು ಸರ್ಕಾರ ಮನವಿ ಮಾಡಿದೆ. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ
[ad_2]
Source link publictv.in

















Leave a Reply