[ad_1]
Mallikarjun Kharge : ಅಸ್ಸಾಂನಲ್ಲಿ ಆರ್ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕರೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅವರ ವಿರುದ್ದ ದೂರು ದಾಖಲಾಗಿದೆ.
ಅಸ್ಸಾಂನ ನಿಲಾಂಬಜಾರ್ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಾರ್ಥನೆಯ ಸಮಯದಲ್ಲೂ ಕಾಣಿಸಿಕೊಳ್ಳುವ ವಿಷಕಾರಿ ಹಾವನ್ನು ಕೊಲ್ಲಬೇಕು ಎಂದು ಕುರಾನ್ ಹೇಳುತ್ತದೆ. ಅದೇ ರೀತಿ ಆರ್ಎಸ್ಎಸ್ ಮತ್ತು ಬಿಜೆಪಿ ಅದೇ ರೀತಿಯ ಹಾವುಗಳಾಗಿವೆ. ಹೀಗಾಗಿ ಅವುಗಳನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದು ಮುಸ್ಲಿಂಮರಿಗೆ ಖರ್ಗೆ ಹೇಳಿದ್ದರು.
ಹೀಗಾಗಿ ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ
The post Bengaluru : ಮುಸ್ಲಿಮರಿಗೆ RSS, BJP ಕಾರ್ಯಕರ್ತರನ್ನು ಕೊಲ್ಲಲು ಖರ್ಗೆ ಕರೆ? ಬೆಂಗ್ಳೂರಲ್ಲಿ ದೂರು ದಾಖಲು appeared first on Hosakananda.
[ad_2]
Source link

















Leave a Reply