Advertisement

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

[ad_1]

lokayukta police arrest chief officer of sirwara town panchayat for accepting bribe of rs 1 lakh

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ (Sirwara Town Panchayat) ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ‌ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ. ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದ. ಸಿನಿಮೀಯ ರೀತಿ ಕಾರಿನಲ್ಲಿ ಚೇಸ್ ಮಾಡಿ ಅಧಿಕಾರಿಯನ್ನು ಲೋಕಾಯುಕ್ತರು ಹಿಡಿದಿದ್ದಾರೆ. ಇದನ್ನೂ ಓದಿ: ದಾವಣಗೆರೆ | 50,000 ಲಂಚ ಸ್ವೀಕರಿಸುವಾಗ ʻಲೋಕಾʼ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ಹಾಗೂ ಪಂಚನಾಮೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ ರವಿ ಪುರುಷೋತ್ತಮ್‌, ಸಿಬ್ಬಂದಿ ವಿಜಯಕುಮಾರ್, ಅಮರೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

[ad_2]

Source link publictv.in

Leave a Reply

Your email address will not be published. Required fields are marked *