Advertisement

ಮಂಗಳೂರು: ಲಾರಿ-ಸ್ಕೂಟರ್‌ ನಡುವೆ ಅಪಘಾತ: ಯುವಕ ಸಾವು

[ad_1]

ಬೆಳ್ತಂಗಡಿ : ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗುರುಪುರದ ಬೇಕರಿ ತಿನಿಸುಗಳ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ತು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತ ಗೋಪಾಲ್ ಕಳೆಂಜ ಗ್ರಾಮದ ದಾಸೋಡಿ ಮನೆಯವರಾಗಿದ್ದು ತಂದೆ ನಾರಾಯಣ ಗೌಡ, ತಾಯಿ ವಾರಿಜ, ಅಕ್ಕ ಪೂರ್ಣಿಮಾ, ತಮ್ಮ ದಾಮೋದರ ಹಾಗೂ ಬಂದು ಮಿತ್ರರನ್ನು ಅಗಲಿದ್ದಾರೆ.

The post ಮಂಗಳೂರು: ಲಾರಿ-ಸ್ಕೂಟರ್‌ ನಡುವೆ ಅಪಘಾತ: ಯುವಕ ಸಾವು appeared first on Hosakananda.

[ad_2]

Source link

Leave a Reply

Your email address will not be published. Required fields are marked *