Advertisement

ಕಾರು, ಟಿಪ್ಪರ್‌ ನಡುವೆ ಡಿಕ್ಕಿ: ಕೇರಳ ಮೂಲದ ಇಬ್ಬರು ಸಾವು

[ad_1]

ಚಾಮರಾಜನಗರ: ಕಾರು ಮತ್ತು ಟಿಪ್ಪರ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಕೇರಳ ಮೂಲದ ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್‌ ಸಮೀಪ ಭೀಕರ ಅಪಘಾತ ನಡೆದಿದೆ. ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೇರಳ ಮೂಲದ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ.

ಚಾಲಕ ಹಾಗೂ ಮಗುವಿಗೆ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



[ad_2]

Source link

Leave a Reply

Your email address will not be published. Required fields are marked *