Advertisement

ದಾವಣಗೆರೆ ಉಪಚುನಾವಣೆ ಎಫೆಕ್ಟ್ ; ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಅಬ್ದುಲ್ ಜಬ್ಬಾರ್ ಅಮಾನತು » Dvgsuddi Kannada | online news portal


ದಾವಣಗೆರೆ: ದಾವಣಗೆರೆ ದಕ್ಷಿಣ ಚುನಾವಣೆ ಫಲಿತಾಂಶಕ್ಕೆ ಮುನ್ನವೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಆಂತರಿಕ ದಂಗಲ್ ಶುರುವಾಗಿದೆ. ಚುನಾವಣೆ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆ ಇಬ್ಬರ ತಲೆದಂಡವಾಗಿದೆ.

ದಾವಣಗೆರೆ: ಡಿಜಿಟಲ್ ಕಸ್ಟಡಿ, ಮನಿ ಲಾಂಡರಿಂಗ್ ಹೆಸರಿನಲ್ಲಿ ಬೆದರಿಕೆ; ನಿವೃತ್ತ ಪ್ರಾಂಶುಪಾಲರಿಗೆ 15 ಲಕ್ಷ‌‌ ವಂಚನೆ

ವಿಧಾನಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್‌ ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶಿಸಿದ್ದಾರೆ.

ಇದಕ್ಕೂ ಮುನ್ನ ಜಬ್ಬಾರ್ ಅವರನ್ನು ಕಾಂಗ್ರೆಸ್​​ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಇನ್ನೂ ನಸೀರ್ ಅಹ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು. ಇದರ ಜತೆಗೆ ಸಚಿವ ಜಮೀರ್​​ಗೂ ಸಿಎಂ ಮನೆಗೆ ಕರೆಸಿ ತರಾಟೆ ತೆಗೆದುಕೊಂಡಿದ್ದು ಆಯಿತು. ಇದೀಗ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡದ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ (MLC) ಅಬ್ದುಲ್ ಜಬ್ಬಾರ್ ಅವರಿಗೆ ಕೆಪಿಸಿಸಿ ಮತ್ತೊಂದು ಶಾಕ್​​ ನೀಡಲಾಗಿದೆ.

ದಾವಣಗೆರೆ:ಪ್ರಯಾಣಿಸುವಾಗ ಬ್ಯಾಗ್ ಅದಲು ಬದಲು; 1 ಲಕ್ಷ ರೂ. ನಗದಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಅಂಧ ವಿದ್ಯಾರ್ಥಿ

ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಬಂಡಾಯಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣಾ ಸಂದರ್ಭದಲ್ಲಿ ಜಬ್ಬಾರ್ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಬಗ್ಗೆ ಕೆಪಿಸಿಸಿಗೆ ಸೂಕ್ತ ದಾಖಲೆಗಳು ಲಭ್ಯವಾಗಿವೆ. ಡಿಕೆ ಶಿವಕುಮಾರ್​ ಅವರ ಈ ನಡೆಯಿಂದ ಸಚಿವ ಜಮೀರ್​​​​ಗೂ ಕೂಡ ನಡುಕ ಶುರುವಾಗಿದೆ. ಡಿಕೆ ಶಿವಕುಮಾರ್​​​​ ಜಮೀರ್​​ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ‌

 



Source link

Leave a Reply

Your email address will not be published. Required fields are marked *