Advertisement

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ಕೋರ್ಟ್ ತೀರ್ಪು


Vinay Kulakarni: ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ(Vinay Kulkarni) ದೋಷಿ ಎಂದು ಕೋರ್ಟ್‌ ಮಹತ್ವದ  ತೀರ್ಪು ನೀಡಿದೆ.

2016 ಜೂನ್​​ನಲ್ಲಿ ಧಾರವಾಡ (Dharwad) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಇಂದು (ಏಪ್ರಿಲ್ 15) ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಿದೆ. ಸತತ 10 ವರ್ಷಗಳ ವಿಚಾರಣೆ ಬಳಿಕ ಕೋರ್ಟ್, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರೆ ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಹೀಗಾಗಿ ಶಾಸಕ  ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಿದ್ದು,  ನಾಳೆ (ಏಪ್ರಿಲ್ 16) ಶಿಕ್ಷೆ  ಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನೂ ಸಹ ಪ್ರಕಟಿಸಲಿದೆ

ಇಷ್ಟು ದಿನ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿ ಇದೀಗ ಮತ್ತೆ ಜೈಲು ಸೇರಬೇಕಾಗಿದೆ. ಕೋರ್ಟ್ ವಾರೆಂಟ್ ಹಾಗೂ ಆರ್ಡರ್‌‌ಗಾಗಿ ಸಿಬಿಐ ಪೊಲೀಸರು ಕಾಯುತಿದ್ದಾರೆ. ಆರ್ಡರ್ ಕಾಪಿ ಸಿಕ್ಕ ಬೆನ್ನಲ್ಲೇ ಸಿಬಿಐ ಪೊಲೀಸರು, ವಿನಯ್ ಕುಲಕರ್ಣಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಿದ್ದಾರೆ.





Source link

Leave a Reply

Your email address will not be published. Required fields are marked *