[ad_1]
2
ಬೆಳ್ತಂಗಡಿ: ನಾಯಿ ಅಡ್ಡ ಬಂದು ಚಲಿಸುತ್ತಿದ್ದ ಆಟೋವೊಂದು ಪಲ್ಟಿಯಾಗಿ ಚಾಲಕ ಸಾವಿಗೀಡಾಗಿರುವ ಘಟನೆ ಅಳದಂಗಡಿಯಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಹಾರಡ್ಡೆ ನಿವಾಸಿ ಡೀಕಯ್ಯ ಪೂಜಾರಿ ಅವರ ಮೂರನೇ ಮಗ ಆಟೋ ವೃತ್ತಿ ಮಾಡುತ್ತಿದ್ದು, ದೇವಪ್ಪ @ಸುಧಾಕರ (37) ಸಾವಿಗೀಡಾದವರು.
ಎ.16 ರಂದು ಬೆಳಗ್ಗೆ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುವ ಸಂದರ್ಭದಲ್ಲಿ ರಸ್ತೆಗೆ ನಾಯಿಯೊಂದು ಅಡ್ಡ ಬಂದಿದ್ದು, ಆಟೋ ಪಲ್ಟಿಯಾಗಿದೆ. ಆಟೋ ಚಾಲಕ ಸುಧಾಕರ್ ಅವರು ಗಂಭೀರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ಸಾಗಿಸಲಾಗಿದ್ದು, ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿರುವ ಕುರಿತು ವರದಿಯಾಗಿದೆ.
[ad_2]
Source link


















Leave a Reply