Advertisement

ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ

[ad_1]


ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿರುವ ಘಟನೆ ನಡೆದಿದೆ.

ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯ ವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.



[ad_2]

Source link

Leave a Reply

Your email address will not be published. Required fields are marked *