Advertisement

ವಿಪಕ್ಷ ತಪ್ಪು ಮಾಡಿದೆ, ಅದರ ಪರಿಣಾಮ ಎದುರಿಸುತ್ತೆ: ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದಕ್ಕೆ ಮೋದಿ ಕಿಡಿ

[ad_1]

Narendra Modi 1

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಬೇಸರ ಹೊರಹಾಕಿದ್ದಾರೆ. ‘ವಿರೋಧ ಪಕ್ಷ ತಪ್ಪು ಮಾಡಿದ್ದು, ಅದರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಬೆಂಬಲಿಸದೇ ವಿರೋಧ ಪಕ್ಷವು ತಪ್ಪು ಮಾಡಿದೆ. ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪುಟಕ್ಕೆ ತಿಳಿಸಿದ್ದಾರೆ. ಸರ್ಕಾರದ ವಿಧಾನದ ಬಗ್ಗೆ ವಿರೋಧ ಪಕ್ಷದ ಟೀಕೆಗಳ ನಡುವೆಯೂ ನಿರ್ಣಾಯಕ ಮಸೂದೆಯು ಸಂಸತ್ತಿನ ಪರೀಕ್ಷೆಯಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ನಡೆಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

ಸಂವಿಧಾನ (131ನೇ ತಿದ್ದುಪಡಿ) ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸ್ಥಾನಗಳನ್ನು ಮೀಸಲಿಡುವ ಗುರಿಯನ್ನು ಹೊಂದಿತ್ತು. ಆದರೆ, ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ವಿಫಲವಾಯಿತು. ಗುರುವಾರ ಆರಂಭವಾಗಿ ಮಧ್ಯರಾತ್ರಿಯವರೆಗೆ ನಡೆದ ಬಿಸಿ ಚರ್ಚೆಯ ನಂತರ ಮಸೂದೆಯು ಕೇವಲ 298 ಮತಗಳ ಪರವಾಗಿ ಬಿದ್ದರೆ, 230 ಸಂಸದರು ಅದನ್ನು ವಿರೋಧಿಸಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

pm modi parliament

ಅವರು (ವಿರೋಧ ಪಕ್ಷ) ದೇಶದ ಮಹಿಳೆಯರನ್ನು ನಿರಾಸೆಗೊಳಿಸಿದ್ದಾರೆ. ಈ ಸಂದೇಶವನ್ನು ಪ್ರತಿಯೊಬ್ಬ ವ್ಯಕ್ತಿಗೂ, ಪ್ರತಿಯೊಂದು ಹಳ್ಳಿಗೂ ತಲುಪಿಸಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಬೆಂಬಲಿಸುವುದಾಗಿ ಈ ಹಿಂದೆ ಹೇಳಿದ್ದವು. ಆದರೆ, ಸರ್ಕಾರದ ವಿಧಾನವು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿವೆ. ಕ್ಷೇತ್ರ ಪುನರ್ವಿಂಗಡಣೆ ನಡೆದರೆ, ದಕ್ಷಿಣ ರಾಜ್ಯಗಳು ಸಂಸತ್ತಿನಲ್ಲಿ ತಮ್ಮ ಪ್ರಾತಿನಿಧ್ಯದಲ್ಲಿ ಇಳಿಕೆ ಕಾಣಬಹುದು ಎಂಬ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ಇದನ್ನೂ ಓದಿ: ದ್ವಿಪೌರತ್ವ ಪ್ರಕರಣ – ರಾಹುಲ್ ಗಾಂಧಿ ವಿರುದ್ಧ FIR ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

ಆದರೆ, ವಿಪಕ್ಷಗಳ ಕಳವಳಕ್ಕೆ ಪ್ರಧಾನಿ ಮೋದಿ ಸ್ಪಷ್ಟನೆ ಕೊಟ್ಟಿದ್ದರು. ಲೋಕಸಭೆಯಲ್ಲಿ ಸ್ಥಾನಗಳ ಸಂಖ್ಯೆ 543 ರಿಂದ 816 ಕ್ಕೆ ಏರಿದಾಗ ದಕ್ಷಿಣದ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಅವರು ವೈಯಕ್ತಿಕ ಭರವಸೆ ನೀಡಿದ್ದರು. ‘ಮಹಿಳೆಯರಿಗೆ ಮೀಸಲಾತಿ ನೀಡುವ ಈ ಮಹತ್ವದ ಅವಕಾಶವನ್ನು ನಾವೆಲ್ಲರೂ ಕಳೆದುಕೊಳ್ಳಬಾರದು. ನಾನು ನಿಮಗೆ ಮನವಿ ಮಾಡಲು ಬಂದಿದ್ದೇನೆ. ಇದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬೇಡಿ, ಇದು ರಾಷ್ಟ್ರೀಯ ಹಿತಾಸಕ್ತಿಯಲ್ಲಿದೆ’ ಎಂದು ಪ್ರಧಾನಿ ಮೋದಿ ತಿಳಿಸಿದ್ದರು. ‘ದಕ್ಷಿಣ ರಾಜ್ಯಗಳ ಪ್ರಸ್ತುತ ಪ್ರಾತಿನಿಧ್ಯವನ್ನು ಸಂರಕ್ಷಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂಸತ್ತಿನಲ್ಲಿ ಭರವಸೆ ನೀಡಿದ್ದರು.

[ad_2]

Source link publictv.in

Leave a Reply

Your email address will not be published. Required fields are marked *