Advertisement

ಹೋಟೆಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

[ad_1]

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಖ್ಯಾ ಗ್ರಾಮದ ಹೊಟೇಲ್ ನಲ್ಲಿ  ಹೊಟೇಲ್ ಕಾರ್ಮಿಕ ಶೌಚಾಲಯಕ್ಕೆ ಹೋಗಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.

ಉತ್ತರ ಪ್ರದೇಶ ಮೂಲದ ಹರಿಶಂಕರ್(52) ಎಂಬಾತ ಸಾವಿಗೀಡಾದ ವ್ಯಕ್ತಿ.

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಮಲ್ನಾಡ್ ಹೊಟೇಲ್ ನಲ್ಲಿ ಎ.18 ರಂದು ಸಂಜೆ ಶೌಚಾಲಯಕ್ಕೆ ಹೋಗಿ ವಾಪಸ್ ಬಾರದೆ ಬಿದ್ದ ಸ್ಥಿತಿಯಲ್ಲಿ ಶವವಾಗಿ ವ್ಯಕ್ತಿ ಪತ್ತೆಯಾಗಿದ್ದಾನೆ.

ಕೆಲಸಗಾರ ಶೌಚಾಲಯಕ್ಕೆ ಹೋಗಿ ಎಷ್ಟೇ ಸಮಯವಾದರೂ ವಾಪಸ್ ಬಾರದೆ ಇದ್ದಾಗ ಕೆಲಸಗಾರರು ಕಿಟಕಿಯಿಂದ ಇಣುಕಿ ನೋಡಿದಾಗ ಮೃತಪಟ್ಟು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಹೊಟೇಲ್ ಮಾಲೀಕರು ಮಾಹಿತಿ ನೀಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

banner

ಮಲ್ನಾಡ್ ಹೊಟೇಲ್ ಮಾಲೀಕರಾದ ಮಂಗಳೂರಿನ ಸತೀಶ್ ಎಂಬವರು ಕೆಲಸಗಾರನನ್ನು ಕೆಲಸಕ್ಕೆ ಸೇರಿಸುವ ವೇಳೆ ಸರಿಯಾದ ಯಾವುದೇ ದಾಖಲೆಗಳನ್ನು ಪಡೆಯದೆ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಆರೋಪಗಳು ಕೇಳಿ ಬಂದಿದೆ. ಮೃತಪಟ್ಟ ಕೆಲಸಗಾರನ ಹೆಸರು ಮತ್ತು ರಾಜ್ಯ ಮಾತ್ರ ತಿಳಿದಿದ್ದು ಯಾವ ವಿಳಾಸದವನು ಎಂದು ಈವರೆಗೆ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಮನೆಮಂದಿಯ ಪತ್ತೆಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

 



[ad_2]

Source link

Leave a Reply

Your email address will not be published. Required fields are marked *