Advertisement

ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ; ಸ್ಕೂಟರ್ ಸವಾರನಿಗೆ ಗಂಭೀರ ಗಾಯ

[ad_1]

ಬೆಳ್ತಂಗಡಿ: ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ.

ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಬಲವಾದ ಪೆಟ್ಟು ಬಿದ್ದಿರುವುದಾಗಿ ವರದಿಯಾಗಿದೆ. ಗಾಯಾಳು ಸವಾರನನ್ನು ಕಿನ್ನಿಗೋಳಿ ಸಮೀಪದ ಪಾದೆ ನಿವಾಸಿ ಎನ್ನಲಾಗಿದೆ. ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.



[ad_2]

Source link

Leave a Reply

Your email address will not be published. Required fields are marked *