[ad_1]
3
ಪುತ್ತೂರು: ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಗಡಿಯಾರ ಎನ್ನುವಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15ವ) ಮೃತಪಟ್ಟ ಬಾಲಕ.


ನೇರಳಕಟ್ಟೆ ಸಮೀಪದ ಗಣೇಶ ನಗರದ ಫ್ಲಾಟ್ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಶಾಲೆಗೆ ರಜೆಯಾಗಿರುವುದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಆಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು.
ಇಂದು ಬೆಳಿಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಈತ.
[ad_2]
Source link

















Leave a Reply