Advertisement

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

[ad_1]

The Madhya Pradesh ministers brother abused and threatened the woman officer

ಭೋಪಾಲ್: ಮಹಿಳಾ ಅಧಿಕಾರಿಯೊಬ್ಬರಿಗೆ ʻನಿನ್ನ ಹಲ್ಲು ಮುರಿದು, ಜೀವಂತವಾಗಿ ಹೂತು  ಹಾಕ್ಬಿಡ್ತೀನಿʼ ಎಂದು ಮಧ್ಯಪ್ರದೇಶದ (Madhya Pradesh) ಸಚಿವ ನಗರ್ ಸಿಂಗ್ ಚೌಹಾಣ್ (Nagar Singh Chauhan)ಅವರ ಸಹೋದರ ಇಂದರ್ ಸಿಂಗ್ ಚೌಹಾಣ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳಾ ಸಬಲೀಕರಣದ ಬಗ್ಗೆ ಚರ್ಚಿಸಲು ಮಧ್ಯಪ್ರದೇಶ ವಿಧಾನಸಭೆಯ ವಿಶೇಷ ಅಧಿವೇಶನ ನಿಗದಿಯಾಗಿದ್ದ ದಿನವೇ ಈ ಘಟನೆ ನಡೆದಿದೆ. ಎಫ್‌ಐಆರ್ ಪ್ರಕಾರ, ಈ ಘಟನೆ ಏಪ್ರಿಲ್ 22 ರಂದು ಅಲಿರಾಜ್‌ಪುರದ ಜನಪದ್ ಪಂಚಾಯತ್ ಕಚೇರಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಕನ್ಯಾ ವಿವಾಹ್ ಯೋಜನೆಯಡಿ ಅನರ್ಹ ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಕೋಪಗೊಂಡ ಚೌಹಾಣ್ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

ಪ್ರತ್ಯಕ್ಷದರ್ಶಿಗಳ ಹೇಳಿಕೆಗಳು ಮತ್ತು ಸಿಇಒ ಪ್ರಿಯಾ ಕಾಗ್ ಸಲ್ಲಿಸಿದ ದೂರಿನ ಪ್ರಕಾರ, ಅವರನ್ನು ನಿಂದಿಸಿ ಬೆದರಿಕೆ ಹಾಕಿದ್ದಲ್ಲದೆ, ಅವರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇಲ್ಲಿ ಎಲ್ಲವೂ ನನ್ನ ಇಚ್ಛೆಯಂತೆ ನಡೆಯುತ್ತದೆ. ನಿನ್ನನ್ನು ಜೀವಂತವಾಗಿ ಹೂತು ಹಾಕಲಾಗುವುದು ಎಂದು ಬೆದರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ ಅಡಿ ಕಠಿಣ, ಜಾಮೀನು ರಹಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಏಪ್ರಿಲ್ 24 ರಂದು ಬಂಧನಕ್ಕೊಳಗಾದ ಕೆಲವೇ ಗಂಟೆಗಳಲ್ಲಿ, ಚೌಹಾಣ್ ಅನಾರೋಗ್ಯ ಮತ್ತು ಅಧಿಕ ರಕ್ತದೊತ್ತಡವನ್ನು ಉಲ್ಲೇಖಿಸಿ ಜಾಮೀನು ಪಡೆದು ಬಿಡುಗಡೆ ಆಗಿದ್ದಾರೆ.

ಅಲಿರಾಜ್‌ಪುರ ಪೊಲೀಸ್ ವರಿಷ್ಠಾಧಿಕಾರಿ ರಘುವಂಶ್ ಸಿಂಗ್ ಭಡೋರಿಯಾ ಅವರು ಆರೋಪಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಮತ್ತು ಅಡಚಣೆಯ ಆರೋಪ ಹೊರಿಸಲಾಗಿದೆ. ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅಲ್ಲಿ ಅವರಿಗೆ ಜಾಮೀನು ಸಿಕ್ಕಿತು ಎಂದು ಮಾಹಿತಿ ನೀಡಿದ್ದಾರೆ.

ಕಳೆದ 32 ವರ್ಷಗಳಲ್ಲಿ ಚೌಹಾಣ್‌ ವಿರುದ್ಧ ಕೊಲೆ, ಕೊಲೆ ಯತ್ನ, ಅಪಹರಣ, ಡಕಾಯಿತಿ ಮತ್ತು ಬೆಂಕಿ ಹಚ್ಚುವಿಕೆ ಸೇರಿದಂತೆ 25ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಗಂಭಿರ ಪ್ರಕರಣಗಳಲ್ಲಿಯೂ ಅವರು ಖುಲಾಸೆಯಾಗಿದ್ದಾರೆ. ಯಾವ ಪ್ರಕರಣದಲ್ಲೂ ಶಿಕ್ಷೆಗೆ ಗುರಿಯಾಗಿಲ್ಲ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಅಧಿಕಾರಿ ಪ್ರಿಯಾ ಕಾಗ್, ಕ್ಷೇತ್ರ ಭೇಟಿಗಳನ್ನು ಸ್ಥಗಿತಗೊಳಿಸಿದ್ದಾರೆ. ಕಚೇರಿ ಕೆಲಸಕ್ಕೆ ಸೀಮಿತರಾಗಿದ್ದಾರೆ ಮತ್ತು ಈಗ ಪೊಲೀಸ್ ರಕ್ಷಣೆಯಲ್ಲಿದ್ದಾರೆ.‌ ಕೆಲಸದ ಸ್ಥಳದಲ್ಲಿ ನನಗೆ ಸುರಕ್ಷತೆ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಬಿಜೆಪಿ (BJP) ಶಾಸಕ ನಗರ್ ಸಿಂಗ್ ಚೌಹಾಣ್ ತಮ್ಮ ಸಹೋದರನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಬಗ್ಗೆ ಅವರು ಪ್ರತಿಕ್ರಿಯಿಸಿ ಸಹೋದರನ ಕೃತ್ಯಕ್ಕೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ. ಇನ್ನೂ ವಿರೋಧ ಪಕ್ಷ ಪಕ್ಷಗಳು, ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿವೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

[ad_2]

Source link publictv.in

Leave a Reply

Your email address will not be published. Required fields are marked *