[ad_1]
2
ಶಿವಮೊಗ್ಗ: ಜಿಲ್ಲೆಯ ಸೊರಬದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಪ್ರಭು ಮೇಸ್ತ್ರಿ ಬಂಧಿತ ಆರೋಪಿ ಮುಖಂಡ. ಸೊರಬ ಪುರಸಭೆ ಮಾಜಿ ಅಧ್ಯಕ್ಷ, ಹಾರ್ಡ್ವೇರ್ ವ್ಯವಹಾರ ಜೊತೆ ಪ್ರಭು ಮೇಸ್ತ್ರಿ ರಾಜಕೀಯದಲ್ಲೂ ಗುರುತಿಸಿಕೊಂಡವರು.


ಭಾನುವಾರ ಪ್ರಭು ಮೇಸ್ತ್ರಿ ಪತ್ನಿ ಮಂಜುಳಾ (39) ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದರು. ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಜುಳಾ ಪೋಷಕರು ಮಗಳ ಸಾವಿಗೆ ಪತಿಯ ಕಿರುಕುಳ ಕಾರಣ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಪತಿಯ ಬಂಧನ ಮಾಡಿದ್ದಾರೆ.
ಮಂಜುಳಾ ಜೊತೆ ಪ್ರಭು ಮೇಸ್ತ್ರಿ 2024 ರಲ್ಲಿ ಎರಡನೇ ಮದುವೆಯಾಗಿದ್ದು, ಈ ಮದುವೆಯ ಬಳಿಕವೂ ಪ್ರಭು ಮೇಸ್ತ್ರಿ ಮಹಿಳೆ ಜೊತೆ ಒಡನಾಟ ಹೊಂದಿರುವ ಆರೋಪ ಕೇಳಿ ಬಂದಿತ್ತು. ಈ ಕುರಿತು ರಾಜೀ ಪಂಚಾಯಿತಿಯೂ ನಡೆದಿತ್ತು ಎಂದು ತಿಳಿದು ಬಂದಿದೆ.
ರಾಜಿ ಪಂಚಾಯಿತಿ ಬಳಿಕವೂ ಪ್ರಭು ಮತ್ತೆ ಅದೇ ಮಹಿಳೆಯೊಂದಿಗೆ ಓಡಾಡ್ತಿದ್ದ ಎನ್ನುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಮಂಜುಳಾ ಅವರಿಗೆ ಕಿರುಕುಳ ನೀಡುತ್ತಿದ್ದ. ಈ ಕಿರುಕುಳ ತಾಳಲಾರದೇ ಮಗಳು ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಆರೋಪಿಸಿ ಮಂಜುಳಾ ತಾಯಿ ದೂರು ನೀಡಿದ್ದರು.
ದೂರಿನನ್ವಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಯನ್ನು ಬಂಧನ ಮಾಡಿದ್ದಾರೆ.
[ad_2]
Source link


















Leave a Reply