Advertisement

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

[ad_1]

Dharwad Suicide

ಧಾರವಾಡ: ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದ ಪ್ರಕರಣ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ.

ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯ್ಯದ್ ತಹಸೀಲ್ದಾರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ತಾಯಿ ನಿರಾಕರಿಸಿದ ಕಾರಣ ಧಾರವಾಡದ ಕಿಟಲ್ ಕಾಲೇಜಿನಲ್ಲಿ ಬಿಎಸ್‌ಸಿ ಓದುತ್ತಿದ್ದ ಆದಿತ್ಯ ಮಗ್ಯಾಗೇರಿ ಮಂಗಳವಾರ (ಏ.28) ನೇಣಿಗೆ ಶರಣಾಗಿದ್ದ.

ಇನ್ನು, ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಪೊಲೀಸರ ಮೇಲೆ ದೂರು ದಾಖಲಿಸಿಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಇದೇ ವೇಳೆ ಕಮಿಷನರ್ ಶಶಿಕುಮಾರ್ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಅಂದ್ರು. ಇತ್ತ, ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಘಟನೆ ಯಾಕಾಗಿದೆ? ಸಾಯಲು ಕಾರಣ ಏನು? ಯಾರು ಕಾರಣ ಅಂತ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್


[ad_2]

Source link publictv.in

Leave a Reply

Your email address will not be published. Required fields are marked *