Advertisement

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು

[ad_1]

Bagaluru Accident Student Death

-ತಂದೆಗೆ ಔಷಧಿ ತರಲು ಹೋಗಿದ್ದಾಗ ಅಪಘಾತ

ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ.

ವರುಣ್ (16) ಮೃತ ದುರ್ದೈವಿ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವರುಣ್ ತಂದೆಗೆ ಆರಾಮಿಲ್ಲ ಎಂದು ಔಷಧಿ ತರಲು ಹೋಗಿದ್ದ. ರಸ್ತೆ ದಾಟಲು ನಿಂತಾಗ ತಲೆ ಸುತ್ತಿ ಬಿದ್ದಿದ್ದಾನೆ. ಈ ವೇಳೆ ಏಕಾಏಕಿ ಖಾಸಗಿ ಬಸ್ ಅಡಿಗೆ ಸಿಲುಕಿದ್ದಾನೆ. ವಿದ್ಯಾರ್ಥಿಯ ಮೇಲೆ ಬಸ್ ಹರಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

ವರುಣ್ ಎಸ್‌ಎಸ್‌ಎಲ್‌ಸಿ ಉನ್ನತ ಶ್ರೇಣಿಯಲ್ಲಿ ಪಾಸ್ ಆಗಿದ್ದ. ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ವೈಟ್ ಟ್ಯಾಪಿಂಗ್ ನಡೆಯುತ್ತಿದೆ. ಈ ಹಿನ್ನೆಲೆ ಎರಡೂ ಭಾಗದ ವಾಹನಗಳು ಒಂದೇ ದಾರಿಯಲ್ಲಿ ಸಾಗಬೇಕು. ಇದರಿಂದ ರಸ್ತೆಯುದ್ದಕ್ಕೂ ವಾಹನದಟ್ಟಣೆ ಕಿರಿಕಿರಿ ಹೆಚ್ಚಾಗಿದೆ. ರಸ್ತೆ ದಾಟಬೇಕೆಂದರೆ ಜನ ಕಾದುಕಾದು ಸುಸ್ತಾಗಬೇಕು. ರಸ್ತೆ ದಾಟಲು ನಿಂತಾಗ ವರುಣ್ ತಲೆ ಸುತ್ತಿ ಬಿದ್ದು ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ


[ad_2]

Source link publictv.in

Leave a Reply

Your email address will not be published. Required fields are marked *