Advertisement

ಮದ್ಯಕ್ಕೆ ನೀರು ತರಲು ನಿರಾಕರಿಸಿದ್ದಕ್ಕೆ 9 ವರ್ಷದ ಬಾಲಕನಿಗೆ ಗುಂಡೇಟು, ಸಾವು

[ad_1]

ಲಕ್ನೋ, ಮೇ 03: ಉತ್ತರ ಪ್ರದೇಶದ ಕಾಸ್ಗಂಜ್‌ ಜಿಲ್ಲೆಯಲ್ಲಿ ನೀರು ತರಲು ನಿರಾಕರಿಸಿದ ಎನ್ನುವ ಕಾರಣಕ್ಕೆ ಒಂಬತ್ತು ವರ್ಷದ ಬಾಲಕನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಾಸ್ಗಂಜ್‌ ಜಿಲ್ಲೆಯ ಸಹವರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಯಾಕುತ್‌ಗಂಜ್‌ ಗ್ರಾಮದಲ್ಲಿ ಕಳೆದ ಶುಕ್ರವಾರದಂದು ನಾಮಕರಣ ಸಮಾರಂಭ ನಡೆಯುತ್ತಿತ್ತು. ಸಂಬಂಧಿಕರು, ಗ್ರಾಮದವರು ಸೇರಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಬಾಲಕನ ತಂದೆಯ ಸಂಬಂಧಿಯಾದ ಧನೇಶ್‌ ಯಾದವ್‌ ಎನ್ನುವಾತ ಮದ್ಯ ಸೇವಿಸುತ್ತಾ ಕುಳಿತಿದ್ದ.

ಮದ್ಯದಲ್ಲಿದ್ದ ಈತ ಮದ್ಯಕ್ಕೆ ನೀರು ತರಲು ಅಲ್ಲೇ ಇದ್ದ ಒಂಬತ್ತು ವರ್ಷದ ಬಾಲಕನಿಗೆ ಹೇಳಿದ್ದು, ಆದರೆ ಬಾಲಕ ನೀರು ತರಲು ನಿರಾಕರಿಸಿದ್ದಾನೆ. ಕೋಪಗೊಂಡ ಧನೇಶ್‌ ತನ್ನ ಬಳಿಯಿದ್ದ ಬಂದೂಕಿನಿಂದ ಮಗುವಿನ ಹೊಟ್ಟೆಗೆ ಗುಂಡು ಹಾರಿಸಿದ್ದಾರೆ. ಗುಂಡಿನ ಶಬ್ದದಿಂದ ಅಲ್ಲಿದ್ದವರೆಲ್ಲ ಬೆಚ್ಚಿಬಿದ್ದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು.

ಗುಂಡೇಟಿನಿಂದ ಗಾಯಗೊಂಡ ಬಾಲಕನನ್ನು ಕೂಡಲೇ ಅಲ್ಲಿದ್ದವರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆಂದು ಅಲಿಗಢಕ್ಕೆ ಸ್ಥಳಾಂತರ ಮಾಡಲಾಯಿತು. ಆದರೆ ಚಿಕಿತ್ಸೆಯ ಸಂದರ್ಭ ಶನಿವಾರ ಬಾಲಕ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.

ಆರೋಪಿ ಧನೇಶ್‌ ಸ್ಥಳದಿಂದ ಪರಾರಿಯಾಗಿದ್ದು, ನಂತರ ಸಂತ್ರಸ್ತ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಖಿತೌಲಿ ಕಾಲುವೆ ಸೇತುವೆಯ ಬಳಿ ಆತನನ್ನು ಬಂಧನ ಮಾಡಿದ್ದಾರೆ. ಬಂದೂಕನ್ನು ವಶಪಡಿಸಲಾಗಿದುದ, ಆರೋಪಿಯನ್ನು ಜೈಲಿಗೆ ಕಳಿಸುವ ಪ್ರಕ್ರಿಯೆ ನಡೆಯುತ್ತಿದೆ.

banner



[ad_2]

Source link

Leave a Reply

Your email address will not be published. Required fields are marked *