Advertisement

ಬೆಳ್ತಂಗಡಿ: ಕ್ರೇನ್ – ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಸಾವು

[ad_1]

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ (49) ಮೃತಪಟ್ಟರಾಗಿದ್ದಾರೆ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟ‌ರ್ ಕಿಶೋ‌ರ್ ಕುಮಾರ್ ಪಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.



[ad_2]

Source link

Leave a Reply

Your email address will not be published. Required fields are marked *