[ad_1]
1
ತಮಿಳುನಾಡಿನಲ್ಲಿ ನಟ ವಿಜಯ್ ದಳಪತಿ ನೇತೃತ್ವದ ಟಿ ವಿ ಕೆ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಒಬ್ಬ ಸಿನಿಮಾ ನಟ ಮೊದಲ ಬಾರಿಗೆ ಪಕ್ಷ ಸ್ಥಾಪಿಸಿ ಚೊಚ್ಚಲವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಈ ಮಟ್ಟದಲ್ಲಿ ಜಯಗಳಿಸಿರುವುದು ದೇಶಾದ್ಯಂತ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದರ ಬೆನ್ನಲ್ಲೇ ಇದೀಗ ನಟ ವಿಜಯ್ ರೀತಿಯಲ್ಲಿಯೇ ಕರ್ನಾಟಕದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಧುಮುಕುತ್ತಾರೆ ಎಂಬ ವಿಚಾರ ಒಂದು ಮುನ್ನಲೆಗೆ ಬಂದಿದೆ.


ಹೌದು, ತಮಿಳುನಾಡಿನಲ್ಲಿ ವಿಜಯ್ ದಳಪತಿ ಆಂಧ್ರಪ್ರದೇಶದಲ್ಲಿ ಪವನ್ ಕಲ್ಯಾಣ್ ಪ್ರೀತಿ ಕರ್ನಾಟಕದಲ್ಲಿ ಶಿವರಾಜ್ ಕುಮಾರ್ ಅವರು ಹೊಸ ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿದೆ. ಆದರೆ, ಶಿವಣ್ಣ ಅವರು ಈ ವಿಷಯದಲ್ಲಿ ಶಿವಣ್ಣ ಅವರು ತಮ್ಮದೇ ಆದ ನಿಲುವನ್ನು ತೆಳೆದಿದ್ದಾರೆ.
ಕೆಲ ವರ್ಷಗಳ ಹಿಂದೆ ರಾಜಕೀಯಕ್ಕೆ ಬರುವುದಿಲ್ಲ ಎಂಬುದನ್ನು ಶಿವರಾಜ್ಕುಮಾರ್ ನೇರವಾಗಿ ಹೇಳಿದ್ದರು..ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕ ವೇದಿಕೆಯಲ್ಲೇ ಶಿವಣ್ಣನಿಗೆ ರಾಜಕೀಯಕ್ಕೆ ಬರುವಂತೆ ಬಹಿರಂಗವಾಗಿ ಆಹ್ವಾನ ನೀಡಿದ್ದರು. ‘ಶಿವರಾಜ್ಕುಮಾರ್ ಅವರೇ, ನೀವು ಪಾರ್ಲಿಮೆಂಟ್ ಚುನಾವಣೆಗೆ ನಿಲ್ಲಲು ರೆಡಿಯಾಗಿ, ನಿಮಗೆ ಎಲ್ಲಿ ಬೇಕೋ ಅಲ್ಲಿ ಸೀಟ್ ಕೊಡುತ್ತೇನೆ’ ಎಂದು ಡಿಕೆಶಿ ಹೇಳಿದ್ದರು.
ಅದಕ್ಕೆ ವೇದಿಕೆಯಲ್ಲೇ ಪ್ರತಿಕ್ರಿಯಿಸಿದ್ದ ಶಿವಣ್ಣ, ‘ನಮ್ಮ ತಂದೆ (ಡಾ. ರಾಜ್ಕುಮಾರ್) ನಮಗೆ ಕೊಟ್ಟಿರುವ ಬಳುವಳಿ ಒಂದೇ, ಅದು ಬಣ್ಣ ಹಚ್ಚುವುದು ಮತ್ತು ನಿಮ್ಮನ್ನು ರಂಜಿಸುವುದು. ನಾನು ಈಗಷ್ಟೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದೇನೆ. ನನಗೆ ಸಿನಿಮಾ ಮಾಡುವುದೇ ಖುಷಿ’ ಎಂದು ವಿನಮ್ರವಾಗಿ ರಾಜಕೀಯ ಪ್ರವೇಶದ ಆಫರ್ ಅನ್ನು ನಿರಾಕರಿಸಿದ್ದರು. ಹೀಗಾಗಿ ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪಿಸುವ ಕುರಿತು ಶಿವಣ್ಣ ಅವರಿಗೆ ಯಾವುದೇ ಆಲೋಚನೆಗಳಿಲ್ಲ ಎಂಬುದು ಸ್ಪಷ್ಟವಾಗುತ್ತದೆ.
[ad_2]
Source link


















Leave a Reply