Advertisement

26 ವರ್ಷದ ಯುವತಿಯನ್ನು ಪ್ರೀತಿಸಲು ಮನೆ ಮಂದಿ ಅಡ್ಡಿ

[ad_1]

26 ವರ್ಷದ ಯುವತಿಯನ್ನು ಪ್ರೀತಿಸುತ್ತಿದ್ದ ವೇಳೆ ಮನೆ ಮಂದಿ ಅಡ್ಡಿ ಬಂದರು ಎಂಬ ಕಾರಣಕ್ಕೆ ನೊಂದ ಹದಿನೈದು ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಅಘಾತಕಾರಿ ಘಟನೆ ಬೆಂಗಳೂರಲ್ಲಿ ನಡೆದಿದೆ.

ಚನ್ನಪಟ್ಟಣ ನಗರದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಬಿಡದಿ ಮೂಲದ ಬಾಲಕ ಮೃತ ದುರ್ದೈವಿ. ಬಿಡದಿ ಮೂಲದ ಶೋಭಾ ಎಂಬ ಯುವತಿ ಜೊತೆ ಬಾಲಕ ಪ್ರೀತಿಯಲ್ಲಿ ಬಿದ್ದಿದ್ದ. ಈ ಬಗ್ಗೆ ಪೋಷಕರು ಬಾಲಕನಿಗೆ ಬೈದು ಬುದ್ಧಿ ಹೇಳಿ ವಯಸ್ಸಿನ ಅಂತರದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಅವರಿಬ್ಬರೂ ಸೋಶಿಯಲ್ ಮೀಡಿಯ ಮುಖಾಂತರ ಸಂಪರ್ಕದಲ್ಲಿದ್ದರೂ ಎನ್ನಲಾಗಿದೆ.

ಮನೆಯಲ್ಲಿ ಈ ಬಗ್ಗೆ ರಂಪ ಆದ  ಬಳಿಕ ಮನೆ ಬಿಟ್ಟು ಬಂದಿದ್ದ ಬಾಲಕ ಚನ್ನಪಟ್ಟಣದ ತನ್ನ ಸ್ನೇಹಿತನ ಮನೆಯಲ್ಲಿದ್ದ.ಯುವತಿ ಜೊತೆ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಏ.29ರಂದು ವಿಷ ಸೇವಿಸಿ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ.4ರಂದು ಬಾಲಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಶೋಭಾ ಎಂಬ ಯುವತಿ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.



[ad_2]

Source link

Leave a Reply

Your email address will not be published. Required fields are marked *