[ad_1]
8
ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.


ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (15) ಹಾಗೂ ಸುನೀತ (21) ಎಂದು ಗುರುತಿಸಲಾಗಿದೆ.
ರಜೆ ದಿನದಲ್ಲಿ ಸ್ನೇಹಿತರ ಜೊತೆ ನದಿಗೆ ಬಂದಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗಿದ್ದಾರೆ.
ಜೊತೆಯಲ್ಲಿದ್ದವರು ರಕ್ಷಿಸಲು ಯತ್ನ ಮಾಡಿದರೂ ಸಾಧ್ಯವಾಗದೇ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಕಡಬ ಪೊಲೀಸರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
[ad_2]
Source link


















Leave a Reply