Advertisement

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ಸಚಿವ ಎನ್ ಎಸ್ ಬೋಸರಾಜು ಭೇಟಿ

[ad_1]

ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಎನ್.ಎಸ್. ಬೋಸರಾಜ್ ಅವರು ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ರವರು ಭೇಟಿ ನೀಡಿ, ಕಾಂಗ್ರೆಸ್‌ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಾದ್ಯಂತ ಅಂತರ್ಜಲ ಅಭಿವೃದ್ಧಿಗಾಗಿ ಕಿಂಡಿ ಅಣೆಕಟ್ಟು ಸೇರಿದಂತೆ ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದೇವೆ. ಮಳೆಗಾಲದಲ್ಲಿ ಮಣ್ಣು ಕೊಚ್ಚಿ ಹೋಗುವುದನ್ನು ತಡೆಗಟ್ಟಲು ಕಿಂಡಿಅಣೆಕಟ್ಟು ಹಾಗೂ ತಡೆಗೋಡೆಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದೇವೆ. ಬೆಳ್ತಂಗಡಿಯಲ್ಲಿ ಹಲವಾರು ಕಿಂಡಿಅಣೆಕಟ್ಟು ಕಾಮಗಾರಿಗಳು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗದ ಕೃಷಿಕರ ಅನುಕೂಲಕ್ಕಾಗಿ ಕಿಂಡಿ ಅಣೆಕಟ್ಟುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. SC, ST ಸಮುದಾಯದ ಅಭಿವೃದ್ಧಿಗೂ ಅನೇಕ ಬೋರ್ವೆಲ್ ಗಳನ್ನು ಕೊರೆಸಲಾಗಿದೆ ಎಂದರು. ಅಲ್ಲದೆ ಅನೇಕ ಜನರು ತಮ್ಮ ಸಮಸ್ಯೆಗಳನ್ನು ಸಚಿವರ ಬಳಿ ಹೇಳಿಕೊಂಡಿದ್ದು, ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್, ಬ್ಲಾಕ್ ಕಾಂಗ್ರೆಸ್‌ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಬಂಗೇರ ಕಾಶಿ ಪಟ್ಟ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಕೆ.ಎಂ ನಾಗೇಶ್ ಕುಮಾ‌ರ್ ಗೌಡ, ಪ್ರವೀಣ್‌ ಹಳ್ಳಿಮನೆ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.



[ad_2]

Source link

Leave a Reply

Your email address will not be published. Required fields are marked *