Advertisement

ಮನೆದೇವರು ಶ್ರೀ ಕಲ್ಲೇಶ್ವರ, ಶಾಮನೂರು ಶಿವಶಂಕರಪ್ಪ ಹೆಸರನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ » Dvgsuddi Kannada | online news portal

[ad_1]

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಮರ್ಥ್ ಶಾಮನೂರು ವಿಧಾನಸೌಧದಲ್ಲಿ ಮನೆದೇವರು ಶ್ರೀ ಕಲ್ಲೇಶ್ವರ ಸ್ವಾಮಿ ಹಾಗೂ ತಾತ ಶಾಮನೂರು ಶಿವಶಂಕರಪ್ಪ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಭದ್ರಾ ಜಲಾಶಯ ನೀರು ; ಮೇ 17ರಿಂದ ಕಡಿತ

ವಿಧಾನಸಭೆ ಸಭಾಪತಿಗಳಾದ ಯು. ಟಿ. ಖಾದರ್ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಉಪಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ ಸೇರಿದಂತೆ ಹಲವು ಶಾಸಕರು ಉಪಸ್ಥಿತರಿದ್ದು ಶುಭಾಶಯ ಕೋರಿದರು.

ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ

ಪ್ರಮಾಣ ವಚನ ಸ್ವೀಕಾರದ ನಂತರ ಮಾತನಾಡಿದ ಸಮರ್ಥ್ ಶಾಮನೂರು ಅವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಜನತೆ ತಮಗೆ ತೋರಿದ ವಿಶ್ವಾಸ ಹಾಗೂ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆಗಳಿಗೆ ತಕ್ಕಂತೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಕ್ಷೇತ್ರದ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ವೃದ್ಧಿ, ಶಿಕ್ಷಣ, ಆರೋಗ್ಯ, ಯುವಜನರ ಸಬಲೀಕರಣ ಹಾಗೂ ಜನಪರ ಯೋಜನೆಗಳಿಗೆ ಆದ್ಯತೆ ನೀಡುವುದಾಗಿ ಹೇಳಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಇಟ್ಟಿರುವ ನಂಬಿಕೆ ದೊಡ್ಡ ಜವಾಬ್ದಾರಿಯಾಗಿದೆ. ಜನರ ಆಶೀರ್ವಾದ ಹಾಗೂ ಹಿರಿಯರ ಮಾರ್ಗದರ್ಶನದೊಂದಿಗೆ ಕ್ಷೇತ್ರವನ್ನು ಅಭಿವೃದ್ಧಿಯ ದಿಕ್ಕಿನಲ್ಲಿ ಕೊಂಡೊಯ್ಯುವ ಸಂಕಲ್ಪ ಹೊಂದಿದ್ದೇನೆ ಎಂದರು.

[ad_2]

Source link

Leave a Reply

Your email address will not be published. Required fields are marked *