Advertisement

ದಾವಣಗೆರೆ: ಕುಡಿಯುವ ನೀರು ಕೃಷಿ ಚಟುವಟಿಕೆ ಬಳಕೆಗೆ ಅವಕಾಶವಿಲ್ಲ: ಸಿಇಓ » Dvgsuddi Kannada | online news portal

[ad_1]

ದಾವಣಗೆರೆ: ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ಸಾರ್ವಜನಿಕ ಕುಡಿಯುವ ನೀರನ್ನು ಬಳಸಬಾರದು ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಿತ್ತೆ ಮಾಧವ ವಿಠ್ಠಲ್ ರಾವ್ ಸೂಚನೆ ನೀಡಿದರು.

ದಾವಣಗೆರೆ: ಕುಡಿಯುವ ನೀರು, ಮೂಲಭೂತ ಸೌಲಭ್ಯಕ್ಕೆ ಒತ್ತು ; ಸರ್ಕಾರದಿಂದ 1 ಸಾವಿರ ಮನೆ ಮಂಜೂರು

ಬೆಳಗಿನ ನಡೆ – ಗ್ರಾಮಗಳ ಕಡೆ” ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.
ಹರಿಹರ ತಾಲ್ಲೂಕಿನ ಬಾನುವಳ್ಳಿ ಬಹು ಗ್ರಾಮ ಕುಡಿಯುವ ನೀರಿನ ಘಟಕ, ಹೊನ್ನಾಳಿ ತಾಲ್ಲೂಕಿನ ಕೂಲಂಬಿ ಬಹು ಗ್ರಾಮ ಕುಡಿಯುವ ನೀರಿನ ಘಟಕ, ಅರೆಹಳ್ಳಿ ಗ್ರಾಮದಲ್ಲಿರುವ ನ್ಯಾಮತಿ ಬಹು ಗ್ರಾಮ ಕುಡಿಯುವ ನೀರಿನ ಘಟಕ, ಚನ್ನಗಿರಿ ತಾಲ್ಲೂಕಿನ ತಾವರಕೆರೆ ಬಹು ಗ್ರಾಮ ಕುಡಿಯುವ ನೀರಿನ ಘಟಕ ಮತ್ತು ಸಂತೆಬೆನ್ನೂರು ಬಹು ಗ್ರಾಮ ಕುಡಿಯುವ ನೀರಿನ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿ ಘಟಕದಲ್ಲಿ ಮರಳನ್ನು ಬದಲಿಸುವಂತೆ, ಸುಣ್ಣ ಬಣ್ಣ ಬಳಿದು ಘಟಕವನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಶುದ್ಧೀಕರಣಗೊಂಡ ನೀರನ್ನು ಪರೀಕ್ಷಿಸಲು ನೀರು ಪರೀಕ್ಷಾ ಪ್ರಯೋಗಾಲಯಕ್ಕೆ ರವಾನಿಸುವಂತೆ, ಘಟಕದ ಸಾಮಗ್ರಿಗಳನ್ನು ಕಾಲಕಾಲಕ್ಕೆ ಬದಲಾಯಿಸಿ ಸಮರ್ಪಕ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭದ್ರಾ ಜಲಾಶಯ ನೀರು ; ಮೇ 17ರಿಂದ ಕಡಿತ

ಕೆಂಗಟ್ಟೆ ಬಹು ಗ್ರಾಮ ಕುಡಿಯುವ ನೀರಿನ ಘಟಕ ಮತ್ತು ನಂದಿಗಾವಿ ಗ್ರಾಮದ ದುಸ್ಥಿತಿಯಲ್ಲಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೂಡಲೇ ದುರಸ್ತಿ ಮಾಡಿ ಸಾರ್ವಜನಿಕರಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.

ಚನ್ನಗಿರಿ ತಾಲ್ಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಭೇಟಿ ನೀಡಿ ಅಲ್ಲಿನ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯವನ್ನು ಪರಿಶೀಲಿಸಿದರು. ಪ್ರಯೋಗಾಲಯದ ಸಿಬ್ಬಂದಿಯಿಂದ ಪರೀಕ್ಷಾ ಪ್ರಕ್ರಿಯೆಗಳ ಕುರಿತು ಮಾಹಿತಿ ಪಡೆದು, ಪರೀಕ್ಷೆಗೆ ತರಲಾಗಿದ್ದ ನೀರಿನ ಮಾದರಿಗಳನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ವೇಳೆ ಉಪಸ್ಥಿತರಿದ್ದರು.

[ad_2]

Source link

Leave a Reply

Your email address will not be published. Required fields are marked *