[ad_1]
1
ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಹಾಗಂತ ಇದು ನಮ್ಮ ಕರ್ನಾಟಕ ಸರ್ಕಾರ ಘೋಷಣೆ ಮಾಡಿರುವುದಲ್ಲ. ಬದಲಿಗೆ ನೆರೆಯ ರಾಜ್ಯ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಘೋಷಿಸಿದ್ದಾರೆ.


ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ‘ರಾಜ್ಯದಲ್ಲಿ ಜನಸಂಖ್ಯೆ ಇಳಿಯುತ್ತಿರುವುದನ್ನು ತಡೆಯಲು ನಾವು ಒಂದು ನಿರ್ಧಾರ ಮಾಡಿದ್ದೇವೆ. ಹೀಗಾಗಿ ಮೂರನೇ ಮಗು ಪಡೆದ ದಂಪತಿಗೆ ಕೂಡಲೇ 30,000, ನಾಲ್ಕನೇ ನಗುವಿಗೆ 40,000 ರೂ ಪ್ರೋತ್ಸಾಹ ಧನ ನೀಡಲಿದ್ದೇವೆ’ ಎಂದು ಹೇಳಿದ್ದಾರೆ.
ಅಂದಹಾಗೆ ಎರಡನೇ ಮಗುವಿನ ಜನನಕ್ಕೆ ₹25,000 ಪ್ರೋತ್ಸಾಹ ಧನ ನೀಡುವ ನಾಯ್ಡು ಅವರ ಹಿಂದಿನ ಘೋಷಣೆಯ ಮುಂದುವರಿದ ಭಾಗ ಇದಾಗಿದೆ. ಯಾಕೆಂದರೆ ಎರಡನೇ ಮಗುವನ್ನು ಹೊಂದುವ ದಂಪತಿಗೆ ₹25,000 ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಿಎಂ ನಾಯ್ಡು ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು.
[ad_2]
Source link

















Leave a Reply