[ad_1]
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮೇ.17 ರಂದು ರಾತ್ರಿ 7:30 ಕ್ಕೆ ದಾಳಿ ಮಾಡಿದ್ದಾರೆ.
ಜೂಜಾಟ ಆಡುತ್ತಿದ್ದ ಪಡಂಗಡಿಯ ಅಶೋಕ್ (37) ,ಪಡಂಗಡಿಯ ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35), ವೇಣೂರು ಕತ್ತೋಡಿಬೈಲಿನ ರಮೇಶ್(40) , ಕುಕ್ಕೇಡಿ ಬರ್ನತ್ಯಾರಿನ ರಾಜೇಶ್(42), ಕಾರ್ಕಳ ಮುಗಿರಡ್ಡಸ ಪ್ರಮೀತ್(35), ನಾರಾವಿ ಅರಸಿಕಟ್ಟೆಯ ಕರುಣಾಕರ(38), ವೇಣೂರು ಶಿವಾಜಿನಗರದ ಶೇಖರ್(50), ಮರೋಡಿಯ ಸಧಾಕರ(42), ಗರ್ಡಾಡಿಯ ನವಾಜ್(26), ಗೇರುಕಟ್ಟೆ ಜನತಾಕಾಲೋನಿಯ ಇಕ್ಷಾಲ್(37), ಕುಕ್ಕೇಡಿಯ ಕಿರಣ್ (35), ವೇಣೂರು ಶಿವಾಜಿನಗರದ ಲಕ್ಷ್ಮಣ(51), ಬೆಳ್ತಂಗಡಿ ಲಾಯಿಲದ ನಿಸಾರ್(47), ಬೆಳ್ತಂಗಡಿ ತೆಂಕಎಡಪದವು ಜೀವಂಧರ್ ಕುಮಾರ್(36), ಗುರುವಾಯನಕೆರೆಯ ಸಂತೋಷ್(37), ಸೋಣಂದೂರು ಅಬ್ದುಲ್ ಅಜೀಜ್ (40) ಬಂಧಿತ 17 ಮಂದಿ ಆರೋಪಿಗಳು.
ಆರೋಪಿಗಳು ಜೂಜಾಟಕ್ಕೆ ಬಳಸಿದ 69 ಸಾವಿರ ರೂಪಾಯಿ ಹಣ, ಎರಡು ಆಟೋ ರಿಕ್ಷಾ, 20 ಮೊಬೈಲ್ ಫೋನ್ ವಶಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ 17 ಮಂದಿ ಆರೋಪಿಗಳ ವಿರುದ್ದ ಕಲಂ 87 ಕೆ.ಪಿ.ಆಕ್ಟ್,112 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ, ಎಎಸ್ಐ ವೆಂಕಟೇಶ್,ಸಿಬ್ಬಂದಿ ಅಬ್ದುಲ್ ಲತೀಫ್, ಕೃಷ್ಣ, ವಸಂತ, ಮೋಹನ, ರಾಕೇಶ್, ಕಾಳಮ್ಮ, ಕಾವೇರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.
The post ಬೆಳ್ತಂಗಡಿ: ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ appeared first on Hosakananda.
[ad_2]
Source link

















Leave a Reply