[ad_1]

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ನಸುಕಿನ ಜಾವ ಮೇಲ್ಛಾವಣಿ ಕುಸಿದು ಜೀವಂತ ಸಮಾಧಿಯಾಗಿದ್ದಾರೆ.
ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದ ಕಾರಣ ಪ್ರಾಣಾಪಾಯದಿಂದ ಪರಾಗಿದ್ದಾನೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸ್ಥಳದಲ್ಲಿ ಮೃತ ಮಹಿಳೆಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
[ad_2]
Source link publictv.in

















Leave a Reply