[ad_1]
6
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಇಂದು ಬದಲಾವಣೆಯಾಗಲಿದ್ದು, ಮುಂದಿನ 7 ದಿನಗಳ ಕಾಲ ಮಳೆಯ ಅಬ್ಬರ ಜೋರಾಗಿರಲಿದೆ. ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗರುದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ ಇಂದು ಮತ್ತು ನಾಳೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.


ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇವತ್ತು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ 5 ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
[ad_2]
Source link

















Leave a Reply